DistrictsNationalPolitics

ನಾಳೆ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಿನ್ನೆಲೆ; ಇಂದು ನಡ್ಡಾ ರಾಜ್ಯಕ್ಕೆ ಆಗಮನ

ಹುಬ್ಬಳ್ಳಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಳೆ ಶಿಗ್ಗಾಂವಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಬೃಹತ್‌ ಮೆರವಣಿಗೆ ಕೂಡಾ ನಡೆಸಲಾಗುತ್ತದೆ. ಈ ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಜೆ.ಪಿ.ನಡ್ಡಾ ಅವರು ಇಂದೇ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ನಡ್ಡಾ ಆಗಮಿಸುತ್ತಿದ್ದಾರೆ. ಇಂದು ಸಂಜೆ ಐದು ಗಂಟೆಗೆ ಹುಬ್ಬಳ್ಳಿಯ ಬಯೋಟೆಕ್‌ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ. ಅನಂತರ ಸಂಜೆ ಏಳು ಗಂಟೆಯ ನಂತರ ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಏಳೂ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಪದಾಧಿಕಾರಿಗಳ ಜೊತೆ ನಡ್ಡಾ ಸಭೆ ನಡೆಸಲಿದ್ದಾರೆ.

ಇನ್ನು ನಾಳೆ ಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿರುವ ನಡ್ಡಾ, ಅನಂತರ ಮೂರುಸಾವಿರ ಮಠಕ್ಕೂ ಭೇಟಿ ನೀಡುವವರಿದ್ದಾರೆ. ಅನಂತರ ಶಿಗ್ಗಾಂವಿಗೆ ತೆರಳಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಸಂಜೆ ಅವರು ಮತ್ತೆ ಹುಬ್ಬಳ್ಳಿಗೆ ಬಂದು ವಿಶೇಷ ವಿಮಾನದಲ್ಲಿ ದೆಹಲಿಗೆ ಮರಳಲಿದ್ದಾರೆ.

Share Post