DistrictsPolitics

ಬಿಜೆಪಿಯಿಂದ ರಿವರ್ಸ್‌ ಆಪರೇಷನ್‌; ಬಿಜೆಪಿ ಸೇರ್ತಾರಾ ಎಸ್‌.ಆರ್‌.ಪಾಟೀಲ್‌

ಬಾಗಲಕೋಟೆ; ಬಿಜೆಪಿಯಿಂದ ಮುನಿಸಿಕೊಂಡಿರುವ ಹಲವು ಲಿಂಗಾಯತ ಪ್ರಮುಖ ನಾಯಕರನ್ನು ಕಾಂಗ್ರೆಸ್‌ ಸೆಳೆದಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇದೀಗ ಬಿಜೆಪಿ ರಿವರ್ಸ್‌ ಆಪರೇಷನ್‌ಗೆ ಮುಂದಾಗಿದೆ. ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ ಕಾಂಗ್ರೆಸ್‌ ತೊರೆಯಲು ಮುಂದಾಗಿದ್ದಾರೆ. ಇದರ ಲಾಭ ಪಡೆದಿರುವ ಬಿಜೆಪಿ ನಾಯಕರನ್ನು ಅವರನ್ನು ಸಂಪರ್ಕಿಸಿದ್ದಾರೆ.

ಸಚಿವ ಮುರುಗೇಶ್‌ ನಿರಾಣಿಯವರು ಎಸ್‌.ಆರ್‌.ಪಾಟೀಲ್‌ ಅವರನ್ನು ಸಂಪರ್ಕಿಸಿದ್ದು, ಬಿಜೆಪಿಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಎಸ್‌.ಆರ್‌.ಪಾಟೀಲ್‌ ಕೂಡಾ ಉತ್ತರ ಕರ್ನಾಟಕ ಭಾಗದ ಹಿರಿಯ ಲಿಂಗಾಯತ ನಾಯಕರಾಗಿದ್ದಾರೆ. ಅವರು ಬೀಳಗಿ ಅಥವಾ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ ಅವರಿಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತೊರೆಯಲು ಮುಂದಾಗಿದ್ದಾರೆ.

Share Post