BengaluruPolitics

ಡಿ.ಕೆ.ಸುರೇಶ್‌ ಸ್ಪರ್ಧೆ ಫಿಕ್ಸಾ..?; ಖರ್ಗೆ, ರಾಹುಲ್‌ ಸೂಚನೆಗೆ ಕಾಯ್ತಿದ್ದಾರಂತೆ ಸಂಸದ..!

ಬೆಂಗಳೂರು; ಪದ್ಮನಾಭನಗರದಲ್ಲಿ ಆರ್‌.ಅಶೋಕ್‌ರನ್ನು ಕಟ್ಟಿಹಾಕಲು ಸಂಸದ ಡಿ.ಕೆ.ಸುರೇಶ್‌ ಕಣಕ್ಕಿಳಿಯೋದು ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಂಸದ ಡಿ.ಕೆ.ಸುರೇಶ್‌ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಪದ್ಮನಾಭನಗರದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿಯವರ ಸೂಚನೆಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾಳೆ ಮಧ್ಯಾಹ್ನ 3 ಗಂಟೆವರೆಗೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಟಿಕೆಟ್‌ ಘೋಷಣೆಯಾಗಿರುವ ರಘುನಾಥ್‌ ನಾಯ್ಡು ಅವರು ಕೂಡಾ ನನ್ನನ್ನು ಆಹ್ವಾನಿಸಿದ್ದಾರೆ. ನನಗೆ ವೈಯಕ್ತಿಕವಾಗಿ ಸ್ಪರ್ಧೆ ಮಾಡೋದಕ್ಕೆ ಇಷ್ಟವಿಲ್ಲ. ಆದ್ರೆ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ನನಗೆ ಮುಖ್ಯವಾಗುತ್ತದೆ. ನಾಳೆ ಗ್ರಹಣ ಅಮಾವಾಸ್ಯೆಯಾಗಿರುವುದರಿಂದ ದಿನ ಚೆನ್ನಾಗಿದೆ ಎಂದು ಹೇಳಿದ್ದಾರೆ. ಶುಭ ಘಳಿಗೆ ಶುಭ ಸಮಯದಲ್ಲಿ ಎಲ್ಲವೂ ನಡೆಯುತ್ತದೆ ಎಂದು ಡಿ.ಕೆ.ಸುರೇಶ್‌ ಹೇಳಿದ್ದಾರೆ.

Share Post