BengaluruCrimePolitics

ಚುನಾವಣೆ ಹೊಸ್ತಿಲಲ್ಲೇ ಡಿಕೆಶಿಗೆ ಹಿನ್ನಡೆ; ಡಿಕೆಶಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು; ಚುನಾವಣೆ ಸಮಯದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾನೂನು ಹಿನ್ನಡೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಅದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದರು. ಆದ್ರೆ, ಸಿಬಿಐ ತನಿಖೆಗೆ ಸೂಚಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

2019 ರಲ್ಲಿ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವ ಅಧಿಕಾರ ಇಲ್ಲ ಎಂದು‌ ಡಿ.ಕೆ.ಶಿವಕುಮಾರ್‌ ಪರ ವಕೀಲರು ವಾದಿಸಿದ್ದರು. ಆದ್ರೆ ಈ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯಪೀಠ ವಜಾ ಮಾಡಿದೆ.

Share Post