BengaluruPolitics

ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರದ ಅವಿಭಾಜ್ಯ ಅಂಗ ಇದ್ದಂತೆ; ಸಿಎಂ ಬೊಮ್ಮಾಯಿ

ಬೆಂಗಳೂರು; ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಎರಡು ಅವಿಭಾಜ್ಯ ಅಂಗಗಳು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಆರ್‌.ವಿಶ್ವನಾಥ್‌ ಪರವಾಗಿ ಪ್ರಚಾರ ನಡೆಸಿದರು.

ಕಾಂಗ್ರೆಸ್‌ ನಾಯಕರು, ಜಾತಿಗಳನ್ನು, ಧರ್ಮವನ್ನು ಒಡೆಯುವ ಕೆಲಸಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಗ್ಯಾರೆಂಟಿ ಕಾರ್ಡ್‌ ಎಂದು ಆಶ್ವಾಸನೆಗಳನ್ನು ನೀಡುತ್ತಿದೆ. ಆದ್ರೆ ಅದು ಗ್ಯಾರೆಂಟಿ ಕಾರ್ಡ್‌ ಅಲ್ಲ, ವಿಸಿಟಿಂಗ್‌ ಕಾರ್ಡ್‌. ಅದನ್ನು ತಗೊಂಡು ಉಪ್ಪಿನಕಾಯಿ ಹಾಕಬೇಕು ಎಂದು ಸಿಎಂ ಹೇಳಿದರು. ವಿಶ್ವನಾಥ್‌ ಅವರು ಬಿಡಿಎ ಅಧ್ಯಕ್ಷರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಹೊಸ ಲೇಔಟ್‌ ನಿರ್ಮಿಸಿದ್ದಾರೆ. ಎಲ್ಲಾ ಸಮುದಾಯದ ಜನರನ್ನು ಕೂಡಾ ವಿಶ್ವನಾಥ್‌ ಅವರು ಒಂದೇ ರೀತಿಯಲ್ಲಿ ನೋಡಿಕೊಂಡಿದ್ದಾರೆ. ಈ ಬಾರಿಯೂ ವಿಶ್ವನಾಥ್‌ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.

 

Share Post