BengaluruDistrictsPolitics

ಮುಂದಿನ ಮುಖ್ಯಮಂತ್ರಿ ಸಿ.ಟಿ.ರವಿ ಆಗಲಿ; ಕೆ.ಎಸ್‌.ಈಶ್ವರಪ್ಪ

ಚಿಕ್ಕಮಗಳೂರು; ಸಿ.ಟಿ.ರವಿಯವರು ಹಿಂದೂ ಹುಲಿ, ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಸಿ.ಟಿ.ರವಿಯವರೇ ಆಗಲಿ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಕಡೂರು ತಾಲ್ಲೂಕಿನಲ್ಲಿ ಈಶ್ವರಪ್ಪ ಬಿಜೆಪಿ ಪರ ಪ್ರಚಾರ ನಡೆಸಿದರು. ಇದೇ ವೇಳೇ ನಿಡಘಟ್ಟದಲ್ಲಿ ಮಾತನಾಡಿದ ಈಶ್ವರಪ್ಪ, ಮುಂದಿನ ಸಿಎಂ ಸಿ.ಟಿ.ರವಿ ಆಗಲಿ ಎಂದರು.

ಸಿ.ಟಿ.ರವಿಯವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ತಮ್ಮ ಕ್ಷೇತ್ರ ಬಿಟ್ಟು ರಾಜ್ಯಾದ್ಯಂತ ಓಡಾಡುತ್ತಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸುತ್ತಿದ್ದಾರೆ. ಹಿಂದೂ ಹುಲಿ ಎಂದೇ ಖ್ಯಾತಿಯಾಗಿರುವ ಸಿ.ಟಿ.ರವಿ ಸಿಎಂ ಆಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಹೀಗಾಗಿ ಮುಂದಿನ ಸಿಎಂ ಅವರೇ ಆಗಲಿ ಎಂದಿದ್ದಾರೆ.

ರಾಷ್ಟ್ರದ್ರೋಹಿ ಮುಸ್ಲಿಮರ ಮತ ಬಿಜೆಪಿಗೆ ಬೇಡ ಎಂದು ನಿನ್ನೆ ಹೇಳಿದ್ದೆ. ಇವತ್ತು, ನಾಳೆ ಕೂಡಾ ಇದೇ ಮಾತನ್ನೇ ಹೇಳುತ್ತೇನೆ ಎಂದು ಈಶ್ವರಪ್ಪ ಇದೇ ವೇಳೆ ಹೇಳಿದ್ದಾರೆ. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ ಎಂದೂ ಈಶ್ವರಪ್ಪ ಹೇಳಿದರು.

Share Post