BengaluruDistrictsPolitics

ಹೆದರಿಸಿ ಯಡಿಯೂರಪ್ಪ ಅವರ ಕೈಯಿಂದ ಪ್ರಚಾರ; ಎಂ.ಬಿ.ಪಾಟೀಲ್‌

ಬೆಂಗಳೂರು; ಯಡಿಯೂರಪ್ಪ ಅವರನ್ನು ಹೆದರಿಸಿ ಅವರಿಂದ ಬಿಜೆಪಿ ಪರ ಪ್ರಚಾರ ಮಾಡಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಗಂಭೀರ ಆಪಾದನೆ ಮಾಡಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಬಿಜೆಪಿ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಹೆದರಿಸಲಾಗಿದೆ ಎಂದು ಹೇಳಿದರು.

ಬಿಜೆಪಿಯವರು ಲಿಂಗಾಯತರನ್ನು ಮುಗಿಸಲು ಹೊರಟಿದ್ದಾರೆ. ಅದಕ್ಕಾಗಿ ಲಿಂಗಾಯತರನ್ನೇ ಬಳಸಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರು ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದೂ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

Share Post