CrimeDistrictsPolitics

EXCLUSIVE; ಮಾವಿನ ಹಣ್ಣಿನ ಬುಟ್ಟಿಯಲ್ಲಿ 1 ಕೋಟಿ ನಗದು..!; ಕಾಂಗ್ರೆಸ್‌ ಅಭ್ಯರ್ಥಿ ಸಹೋದರ ಮನೆಯಲ್ಲಿ ಸಿಕ್ಕಿದ್ದೆಷ್ಟು..?

ಮೈಸೂರು; ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದ್ದು, ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಯ ಸಹೋದರ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಮೈಸೂರಿನ ನಿವಾಸಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಮಾವಿನ ಹಣ್ಣಿನ ಬಾಕ್ಸ್‌ನಲ್ಲಿ ಬಚ್ಚಿಡಲಾಗಿದ್ದ ಒಂದು ಕೋಟಿ ರೂಪಾತಿ ನಗದು ಸಿಕ್ಕಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ರೈ ಅವರ ಮನೆ ಆವರಣದಲ್ಲಿರುವ ಮರದಲ್ಲಿ ಒಂದು ಬಾಕ್ಸ್‌ ಇಡಲಾಗಿತ್ತು. ಆ ಬಾಕ್ಸ್‌ ಐಟಿ ಅಧಿಕಾರಿಗಳ ಗಮನಕ್ಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆ ಬಾಕ್ಸ್‌ನ್ನು ಇಳಿಸಿ ಪರಿಶೀಲನೆ ಮಾಡಿದ್ದು ಅದರಲ್ಲಿ 1 ಕೋಟಿ ರೂಪಾಯಿ ನಗದು ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಕೆ.ಸುಬ್ರಹ್ಮಣ್ಯ ರೈ ಅವರು ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ಅವರ ಸಹೋದರ ಎಂದು ತಿಳಿದುಬಂದಿದೆ.

Share Post