BengaluruCrimePolitics

Kharge; ಮಲ್ಲಿಕಾರ್ಜುನ ಖರ್ಗೆ, ಕುಟುಂಬ ಕೊಲ್ಲಲು ಸಂಚು; ಆಡಿಯೋ ರಿಲೀಸ್‌ ಮಾಡಿದ ಸುರ್ಜೇವಾಲಾ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲಲು ಬಿಜೆಪಿ ಪಕ್ಷ ಸಂಚು ರೂಪಿಸಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಸುರ್ಜೇವಾಲಾ ಅವರು ಆಡಿಯೋ ಒಂದನ್ನು ರಿಲೀಸ್‌ ಮಾಡಿದ್ದಾರೆ. ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರು ಖರ್ಗೆ ಕುಟಂಬದ ಹತ್ಯೆ ಬಗ್ಗೆ ಮಾತನಾಡಿದ್ದಾರೆಂಬ ಆಡಿಯೋ ಅದಾಗಿದೆ. ಚುನಾವಣೆ ಹತ್ತಿರದಲ್ಲಿದ್ದಾಗ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದು, ಅದಕ್ಕೆ ಸಾಕ್ಷಿಯಾಗಿ ಆಡಿಯೋ ರಿಲೀಸ್‌ ಮಾಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಖರ್ಗೆ, ಅವರ ಪತ್ನಿ ಹಾಗೂ ಇಡೀ ಕುಟುಂಬದ ಹತ್ಯೆ ಸಂಚು ನಡೆದಿದೆ. ಇದು ಗೊತ್ತಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರೆಲ್ಲಾ ಸುಮ್ಮನಿದ್ದಾರೆ ಎಂದು ಸುರ್ಜೇವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರು ಸಿಎಂ ಬೊಮ್ಮಾಯಿ ಆಪ್ತರಾಗಿದ್ದು, ಅವರು ಮಾತನಾಡಿರುವ ಆಡಿಯೋದಲ್ಲಿ ಖರ್ಗೆ ಕುಟುಂಬವನ್ನು ಕೊಲೆ ಮಾಡುವ ಬಗ್ಗೆ ಮಾತನಾಡಲಾಗಿದೆ ಎಂದು ಸುರ್ಜೇವಾಲ ಆರೋಪ ಮಾಡಿದ್ದಾರೆ.

Share Post