BengaluruPolitics

ವರುಣಾದಲ್ಲಿ ಸೋಮಣ್ಣ ಗೆಲ್ತಾರೆ, ಶೆಟ್ಟರ್‌, ಸವದಿ ಹೀನಾಯವಾಗಿ ಸೋಲ್ತಾರೆ; ಅಮಿತ್‌ ಶಾ

ಬೆಂಗಳೂರು; ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರು ಗೆಲ್ಲಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಈ ಬಾರಿ ರಾಜ್ಯದಲ್ಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ಬಿಜೆಪಿ ಪಕ್ಷ ಬಿಟ್ಟು ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಯವರು ಕಾಂಗ್ರೆಸ್‌ ಸೇರಿದ್ದಾರೆ. ಆದ್ರೆ ಅವರು ಈ ಚುನಾವಣೆಯಲ್ಲಿ ಧೂಳಿಪಟವಾಗಲಿದ್ದಾರೆ. ಇಬ್ಬರೂ ಭಾರೀ ಅಂತರದಲ್ಲಿ ಹೀನಾಯವಾಗಿ ಸೋಲಲಿದ್ದಾರೆ ಎಂದು ಅಮಿತ್‌ ಶಾ ಇದೇ ವೇಳೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಎಲ್ಲೆಲ್ಲಿ ರೋಡ್‌ ಶೋ ನಡೆಸಿದ್ದಾರೋ ಆ ರಾಜ್ಯಗಳಲ್ಲೆಲ್ಲಾ ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲೂ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share Post