CrimeDistrictsPolitics

ಪ್ರದೀಪ್‌ ಈಶ್ವರ್‌ ಸಂಬಂಧಿ ಮನೆಯಲ್ಲಿ ಏನೂ ಸಿಗಲಿಲ್ಲ..!

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಈ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ಸಂಬಂಧಿಕರೊಬ್ಬರ ಮನೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಹೀಗಾಗಿ ಶೋಧ ನೋಡಲು ಹೋದ ಅಧಿಕಾರಿಗಳು ಬರಿಗೈಲಿ ವಾಪಸ್ಸಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರದೀಪ್‌ ಈಶ್ವರ್‌ ಅವರ ಸಂಬಂಧಿ ಶ್ರೀಧರ್‌ ಅವರ ಮನೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಲಾಗಿದೆ ಎಂದು ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಸರ್ಚ್‌ ವಾರೆಂಟ್‌ನೊಂದಿಗೆ ಅವರ ಮನೆಗೆ ಭೇಟಿ ನೀಡಿದ್ದರು.

ಶ್ರೀಧರ್‌ ಮನೆಯಲ್ಲಿ ಶೋಧ ನಡೆಸಿದಾಗ ಅವರಿಗೆ ಏನೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಅವರು ಬರಿಗೈಲಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ.

 

Share Post