CrimeDistricts

ಬಸ್‌ ಚಾಲಕನನ್ನು ಅಟ್ಟಾಡಿಸಿ ಕೊಂಡ ದುಷ್ಕರ್ಮಿಗಳು; ಹಾಡಹಗಲೇ ಕೃತ್ಯ

ಕಲಬುರಗಿ; ಬಸ್‌ ನಿಲ್ದಾಣದಲ್ಲೇ ಬಸ್‌ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಕಲಬುರಗಿ ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಾಗಯ್ಯ ಸ್ವಾಮಿ ಎಂಬ ಬಸ್‌ ಚಾಲಕನೇ ಕೊಲೆಯಾದ ವ್ಯಕ್ತಿ. ಆರೋಪಿಗಳು ಕೃತ್ಯ ಎಸಗಿದ ನಂತರ ಪರಾರಿಯಾಗಿದ್ದಾರೆ.

ನಾಗಯ್ಯ ಸ್ವಾಮಿ ಸಾರಿಗೆ ಬಸ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಿಟಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಲೇ ನಾಗಯ್ಯ ಸ್ವಾಮಿಯ ಹೆಬ್ಬೆರಳು ಕಟ್‌ ಆಗಿದೆ. ಕೂಡಲೇ ಎಚ್ಚೆತ್ತ ನಾಗಯ್ಯ ಸ್ವಾಮಿ ಅಲ್ಲಿಂದ ಓಡಲು ಶುರು ಮಾಡಿದ್ದಾರೆ. ಆದ್ರೆ ಬೆನ್ನತ್ತಿದ ದುಷ್ಕರ್ಮಿಗಳು ಎಲ್ಲರೂ ನೋಡ ನೋಡುತ್ತಿದ್ದಂತೆ ನಾಗಯ್ಯ ಸ್ವಾಮಿಯನ್ನು ಕೊಂದು ಪರಾರಿಯಾಗಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ.  ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post