CrimeDistrictsUncategorized

ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ಜಗಳ; ಒಬ್ಬನಿಗೆ ಚಾಕು ಇರಿತ

ಕೋಲಾರ; ಚುನಾವಣೆ ಮುಗಿದು ಇನ್ನೇನು ನಾಳೆ ಫಲಿತಾಂಸ ಬರಲಿದೆ. ಆದ್ರೂ ಚುನಾವಣಾ ದ್ವೇಷಗಳ ಮಾತ್ರ ಕಡಿಮೆಯಾಗಿಲ್ಲ. ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ರಾಜಕೀಯ ದ್ವೇಷದಿಂದ ಅಹಿತಕರ ಘಟನೆಯೊಂದು ನಡೆದಿದೆ. ಜೆಡಿಎಸ್‌ ಮುಖಂಡನೊಬ್ಬ ಕಾಂಗ್ರೆಸ್‌ ಮುಖಂಡನಿಗೆ ಚಾಕುವಿನಿಂದ ಇರಿದಿದ್ದಾನೆ.

ಶ್ರೀನಿವಾಪುರ ಪಟ್ಟಣದ ಚಿಂತಾಮಣಿ ಸರ್ಕಲ್‌ನಲ್ಲಿ ಈ ಕೃತ್ಯ ಎಸದಲಾಗಿದೆ. ಕಾಂಗ್ರೆಸ್‌ ಮುಖಂಡ ತಜಮುಲ್‌ಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿರುವುದರಿಂದ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಡಿಎಸ್‌ ಅಭ್ಯರ್ಥಿ ವೆಂಕಟಶಿವಾರೆಡ್ಡಿ ಬೆಂಬಲಿಗ ಸಾಧಿಕ್‌ ಎಂಬುವವರ ಸಹೋದರ ಆರೀಫ್‌ ಹಾಗೂ ಆತನ ಇಬ್ಬರು ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮತದಾನದ ದಿನ ಬೂತ್‌ ಬಳಿ ವಾಹನ ನಿಲ್ಲಿಸುವ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿತ್ತು. ಇದೇ ವಿಚಾರವಾಗಿ ಇಂದು ತಜಮುಲ್‌ ಮೆಲೆ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಹಾಗೂ ಆಸ್ಪತ್ರೆ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Share Post