BengaluruPolitics

ದೆಹಲಿಯತ್ತ ಸಿಎಂ ಆಕಾಂಕ್ಷಿಗಳು; ಬೇರೆ ಬೇರೆ ವಿಮಾನದಲ್ಲಿ ಪ್ರಯಾಣ

ಬೆಂಗಳೂರು; ಕರ್ನಾಟಕದ ಮುಖ್ಯಮಂತ್ರಿ ಯಾರಾಗ್ತಾರೆ ಎಂಬುದಕ್ಕೆ ಸಂಜೆಯೊಳಗೆ ಉತ್ತರ ಸಿಗುವ ಸಾಧ್ಯತೆ ಇದೆ. ಈಗಾಗಲೇ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ ವೀಕ್ಷಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದು, ಹೈಕಮಾಂಡ್‌ಗೆ ಮಾಹಿತಿ ನೀಡಲಿದ್ದಾರೆ. ಇನ್ನು ಮಧ್ಯಾಹ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಧ್ಯಾಹ್ನ 1.45ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 12 ಗಂಟೆಗೆ ಡಿ.ಕೆ.ಶಿವಕುಮಾರ್‌ ಅವರು ಮನೆಯಿಂದ ಹೊರಡಲಿದ್ಧಾರೆ. ಸಂಜೆ ನಾಲ್ಕು ಗಂಟೆ ವೇಳೆಗೆ ದೆಹಲಿಯಲ್ಲಿ ಲ್ಯಾಂಡ್‌ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನ 3.45ರ ವೇಳೆಗೆ ಅವರು ದೆಹಲಿ ತಲುಪಲಿದ್ದಾರೆ.

ಸಂಜೆ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಒಟ್ಟಿಗೆ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿದ್ದಾರೆ. ಖರ್ಗೆಯನ್ನು ಇಬ್ಬರನ್ನೂ ಕೂರಿಸಿಕೊಂಡು ಸಂಧಾನ ಮಾಡಿ, ಕಾಂಗ್ರೆಸ್‌ ಶಾಸಕ ಪಕ್ಷದ ನಾಯಕ ಸ್ಥಾನವನ್ನು ಫೈನಲ್‌ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Share Post