BengaluruPolitics

9.40ಕ್ಕೆ ದೆಹಲಿಗೆ ತೆರಳಲಿದ್ದಾರೆ ಡಿ.ಕೆ.ಶಿವಕುಮಾರ್

ಬೆಂಗಳೂರು; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಕಗ್ಗಂಟಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಇಬ್ಬರೂ ಈ ಸ್ಥಾನಕ್ಕಾಗಿ ಪಟ್ಟು ಹಿಡಿದ್ದಾರೆ. ನಿನ್ನೆ ಅನಾರೋಗ್ಯದ ಕಾರಣ ದೆಹಲಿ ತೆರಳದೇ ಮನೆಯಲ್ಲೇ ಇದ್ದ ಡಿ.ಕೆ.ಶಿವಕುಮಾರ್‌ ಇಂದು ದೆಹಲಿಗೆ ಹೋಗುತ್ತಿದ್ದಾರೆ.

ಬೆಳಗ್ಗೆ 9.40ಕ್ಕೆ ವಿಸ್ತಾರ ವಿಮಾನದಲ್ಲಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ದೆಹಲಿಯಲ್ಲಿದ್ದಾರೆ. ಇಂದು ಮಧ್ಯಾಹ್ನ ಸೋನಿಯಾಗಾಂಧಿಯವರು ಶಿಮ್ಲಾದಿಂದ ದೆಹಲಿಗೆ ಬರಲಿದ್ದಾರೆ. ಅನಂತರ ಡಿ.ಕೆ.ಶಿವಕುಮಾರ್‌ ಅವರು ಸೋನಿಯಾಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇಂದು ಸಂಜೆ ಮೀಟಿಂಗ್‌ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಇಂದೇ ಆಯ್ಕೆ ಮಾಡುವ ಸಾಧ್ಯತೆ ಇದೆ. ಎಲ್ಲವೂ ಸರಿಯಾದರೆ ಮೇ 18ರಂದು ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

Share Post