NationalPolitics

ಡಿಕೆಶಿ ಭೇಟಿ ಅಂತ್ಯ; ಖರ್ಗೆ ಭೇಟಿ ಮಾಡಿದ ಸಿದ್ದರಾಮಯ್ಯ

ನವದೆಹಲಿ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರ ಕೊನೆ ಹಂತಕ್ಕೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬಿಸಿ ಬಿಸಿ ಚರ್ಚೆ ನಡೆದಿದೆ. ಮೊದಲಿಗೆ ಡಿ.ಕೆ.ಶಿವಕುಮಾರ್‌ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ಮಾಡಿದ್ದಾರೆ. ತಮ್ಮ ವಾದ ಏನಿದೆ ಅದನ್ನು ಮಂಡಿಸಿದ್ದಾರೆ. ಇದೇ ವೇಳೆ ಖರ್ಗೆಯವರು ಹೈಕಮಾಂಡ್‌ ಸೂತ್ರವನ್ನು ತಿಳಿಸಿದ್ದಾರೆ.

ಕೊಟ್ಟರೆ ಸಿಎಂ ಹುದ್ದೆ ಕೊಡಿ. ಇಲ್ಲಾಂದ್ರೆ ಸರ್ಕಾರದಲ್ಲಿ ನನ್ನ ಪಾತ್ರ ಯಾವುದೂ ಬೇಡ ಎಂದು ಡಿ.ಕೆ.ಶಿವಕುಮಾರ್‌ ಅವರು ಬಲವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಇದೀಗ ಡಿ.ಕೆ.ಶಿವಕುಮಾರ್‌ ಅವರು ಒನ್‌ ಟು ಒನ್‌ ಸಭೆ ಮುಗಿಸಿ ವಾಪಸ್ಸಾಗಿದ್ದಾರೆ. ಇದೀಗ ಸಿದ್ದರಾಮಯ್ಯ ಅವರು ಖರ್ಗೆ ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಕೂಡಾ ತಮ್ಮ ವಾದ ಮಂಡಿಸುತ್ತಿದ್ದಾರೆ.

Share Post