NationalPoliticsUncategorized

12 ಗಂಟೆಗೆ ಡಿ.ಕೆ.ಶಿವಕುಮಾರ್‌ರಿಂದ ರಾಹುಲ್‌ ಗಾಂಧಿ ಭೇಟಿ ಸಾಧ್ಯತೆ

ನವದೆಹಲಿ; ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಕೆ.ಸಿ.ವೇಣುಗೋಪಾಲ್‌ ಜೊತೆ ರಾಹುಲ್‌ ರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಭೇಟಿ ನಂತರ ಡಿ.ಕೆ.ಶಿವಕುಮಾರ್‌ ಅವರು ಕೂಡಾ ರಾಹುಲ್‌ ಗಾಂಧಿವರನ್ನು ಭೇಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದ್ದಾರೆ. ಅವರು ದೆಹಲಿಗೆ ಬರುವಾಗ ಸೋನಿಯಾಗಾಂಧಿಯವರು ಶಿಮ್ಲಾದಿಂದ ಬರುತ್ತಾರೆ. ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದರು. ಆದ್ರೆ ಸೋನಿಯಾ ಗಾಂಧಿ ಇನ್ನೂ ಶಿಮ್ಲಾದಲ್ಲೇ ಇದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಇಂದು ರಾಹುಲ್‌ ಗಾಂಧಿಯವರನ್ನು ಭೇಟಿಯಾಗುತ್ತಿದ್ದಾರೆ.

ನಿನ್ನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಿಲುವು ತಿಳಿಸಿದ್ದರು. ಇದೀಗ ರಾಹುಲ್‌ ಗಾಂಧಿ ಭೇಟಿಯಾಗುತ್ತಿದೆ. ಅದಾದ ನಂತರ ಖರ್ಗೆ ಮನೆಯಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಎಂದು ಹೇಳಲಾಗುತ್ತಿದೆ. ನಾಳೆ ಅಥವಾ ಶನಿವಾರ ನೂತನ ಸಿಎಂ ಪ್ರಮಾಣವಚನ ನಡೆಯಲಿ ಎಂದು ಹೇಳಲಾಗುತ್ತಿದೆ.

Share Post