NationalPolitics

ಸಿಎಂ ಆಯ್ಕೆ ಇನ್ನೂ ಅಂತಿಮವಾಗಿಲ್ಲ; ರಣದೀಪ್‌ ಸುರ್ಜೇವಾಲಾ

ನವದೆಹಲಿ; ಬೆಳಗ್ಗಿನ ಬೆಳವಣಿಗೆಗಳ ನಂತರ ಸಿದ್ದರಾಮಯ್ಯ ನಾಳೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಹೈಕಮಾಂಡ್‌ ಈ ಬಗ್ಗೆ ಏನನ್ನೂ ತೀರ್ಮಾನವಾಗಿಲ್ಲವಂತೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದಿದ್ದಾರೆ.

ಹೈಕಮಾಂಡ್ ನಾಯಕರು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆಗಳನ್ನು ನಡೆಸಿದ್ದಾರೆ. ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಸುರ್ಜೇವಾಲಾ ಹೇಳಿದ್ದಾರೆ.  ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದೂ ಸುರ್ಜೇವಾಲಾ ಹೇಳಿದ್ದಾರೆ.

ಹೀಗಾಗಿ  ನಾಳೆ ಪ್ರಮಾಣವಚನ ಸುಳ್ಳು ಎಂದು ತಿಳಿದುಬಂದಿದೆ.

 

Share Post