NationalPolitics

ಸಿಎಂ ಆಯ್ಕೆ ವಿಚಾರ; ಹೇಳಿಕೆ ನೀಡಿದವರಿಗೆ ನೋಟಿಸ್‌

ನವದೆಹಲಿ; ಸಿಎಂ ಸ್ಥಾನಕ್ಕೆ ಆಯ್ಕೆ ಸಂಬಂಧ ಹೇಳಿಕೆ ನೀಡಿದ್ದವರಿಗೆ ನೋಟಿಸ್‌ ಜಾರಿ ಮಾಡಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಧಿಕೃತವಾಗಿ ಘೋಷಣೆ ಮಾಡುತ್ತದೆ. ಅಲ್ಲಿಯವರೆಗೂ ಯಾರೂ ಏನನ್ನೂ ಮಾತನಾಡಬಾರದು ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಹಾಗೂ ಅಶೋಕ್‌ ಪಟ್ಟಣ್‌ ಅವರು ಎಕ್ಸೈಟ್‌ಮೆಂಟ್‌ ತಡೆಯಲಾರದೆ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಕೆಲವೇ ನಿಮಿಷಗಳಲ್ಲಿ ಘೋಷಣೆಯಾಗುತ್ತೆ ಎಂದು ಹೇಳಿದ್ದರು. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗರಂ ಆಗಿದ್ದರು. ಈ ರೀತಿಯ ಹೇಳಿಕೆ ನೀಡಲು ಅವರಿಗೆ ಯಾರು ಅಧಿಕಾರ ಕೊಟ್ಟರು ಎಂದು ಗರಂ ಆಗಿದ್ದರು.

ಇದಾದ ಮೇಲೆ ಸುದ್ದಿಗೋಷ್ಠಿ ನಡೆಸಿದ ಸುರ್ಜೇವಾಲಾ ಅವರು, ಇಬ್ಬರಿಗೂ ನೋಟಿಸ್‌ ಜಾರಿ ಮಾಡಲು ಸೂಚಿಸುತ್ತೇನೆ ಎಂದು ಹೇಳಿದರು.

Share Post