DistrictsPolitics

ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸವದಿ; ಸಚಿವಗಿರಿ ಸಿಗದಿದ್ದಕ್ಕೆ ಏನಂದ್ರು ಗೊತ್ತಾ..?

ಬೆಂಗಳೂರು; ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದ ಲಕ್ಷ್ಮಣ ಸವದಿಯಿಂದ ಕಾಂಗ್ರೆಸ್‌ಗೆ ಸಾಕಷ್ಟು ಲಾಭವಾಗಿತ್ತು. ಆದ್ರೆ, ಸವದಿಯವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಹೀಗಿದ್ದರೂ ಸವದಿ ಸುಮ್ಮನಿದ್ದರು. ಇದೇ ಮೊದಲ ಬಾರಿಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಜೆಪಿಯವರು ಈ ಬಗ್ಗೆ ಟೀಕೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅವರು, ರಾಜಕೀಯ ನಾಯಕರಿಗೆ ದೂರದೃಷ್ಟಿ ಇರಬೇಕು, ತಾಳ್ಮೆ ಬೇಕು. ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೇನೂ ನಿರಾಸೆಯಾಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾತನಾಡಿರುವ ಅವರು, ಸಚಿವ ಸ್ಥಾನ ಸಿಗುತ್ತದೆಂಬ ನಿರೀಕ್ಷೆಗಳು ಎಲ್ಲರಿಗೂ ಇರುತ್ತವೆ. ನನಗೂ ಇದ್ದವು. ಆದ್ರೆ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ. ನಾನು ಮೊದಲ ಪಕ್ಷದ ಕೆಲಸ ಮಾಡುತ್ತೇನೆ. ತಾಳ್ಮೆ ಇರಬೇಕು. ಮುಂದೆ ನನಗೆ ಅಧಿಕಾರ ಸಿಗುತ್ತದೆಂಬ ವಿಶ್ವಾಸವಿದೆ ಎಂದು ಸವದಿ ತಿಳಿಸಿದ್ದಾರೆ.

Share Post