BengaluruDistricts

ಅಯ್ಯಪ್ಪ ದೇಗುಲದ ಕುಂಭಾಭಿಷೇಕದಲ್ಲಿ ಪಾಲ್ಗೊಂಡ ಡಿಕೆಶಿ ದಂಪತಿ

ರಾಮನಗರ; ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಿನ್ನೆ ಕನಕಪುರಕ್ಕೆ ಭೇಟಿ ನೀಡಿದ್ದರು. ಕನಕಪುರ ಪಟ್ಟಣದಲ್ಲಿ ಅಯ್ಯಪ್ಪಸ್ವಾಮಿ ದೇಗುಲವನ್ನು ನೂತನವಾಗಿ ನಿರ್ಮಾಣ ಮಾಡಲಾಗಿದ್ದು, ದೇವರಿಗೆ ಕುಂಭಾಭಿಷೇಕ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪತ್ನಿ ಸಮೇತ ಡಿ.ಕೆ.ಶಿವಕುಮಾರ್‌ ಅವರು ಪಾಲ್ಗೊಂಡಿದ್ದರು.

ನಿನ್ನೆ ರಾತ್ರಿ ಡಿಸಿಎಂ ಡಿ.ಕೆ ಶಿವಕುಮಾರ್ ಕನಕಪುರಕ್ಕೆ ಭೇಟಿ ಕೊಟ್ಟಿದ್ದರು. ತಮ್ಮ ಆಪ್ತನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನಂತರ ಅಯ್ಯಪ್ಪಸ್ವಾಮಿ ದೇವಾಲಯದ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡರು. ದೇಗುಲದಲ್ಲೇ ಪ್ರಸಾದ ಸೇವಿಸಿದ ಡಿ.ಕೆ.ಶಿವಕುಮಾರ್‌ ಬೆಂಗಳೂರಿಗೆ ರಾತ್ರಿಯೇ ವಾಪಸ್ಸಾಗಿದ್ದಾರೆ. ಜೂನ್‌ 3 ರಂದು ಕನಕಪುರ ಜನತೆಗೆ ಕೃತಜ್ಞತೆ ತಿಳಿಸಲು ಅವರು ಕ್ಷೇತ್ರ ಸಂಚಾರ ಮಾಡಲಿದ್ದಾರೆ.

Share Post