CrimeDistricts

ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು

ಮೈಸೂರು; ಮೈಸೂರು ಜಿಲ್ಲೆ ಹುಣಸೂರು ಬಳಿ ಸರ್ಕಾರಿ ಬಸ್‌ ಹಾಗೂ ಸ್ವಿಫ್ಟ್‌ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಗ್ರಾಮಪಂಚಾಯತ್‌ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. ಬನ್ನಿಕುಪ್ಪೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

ನಿಲುವಾಗಿಲು ಗ್ರಾಮ ಪಂಚಾಯತ್‌ ಸದಸ್ಯ ಭಾಸ್ಕರ್‌ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ಭಾಸ್ಕರ್ ಅವರು ತಮ್ಮ ಸ್ವಿಫ್ಟ್ ಕಾರಿನಲ್ಲಿ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಉಳಿದವರು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post