CrimeDistricts

ಹೊಟ್ಟೆನೋವು ತಾಳದೆ ಕೆರೆಗೆ ಹಾರಿ 7ನೇ ಕ್ಲಾಸ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು; ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೈಸೂರು ಜಿಲ್ಲೆ ನಂಜನಗೂಡು ಬಳಿಯ ಹುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏಳನೇ ತರಗತಿ ವಿದ್ಯಾರ್ಥಿನಿ ಗೀತಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಗೀತಾ ಗುಂಡ್ಲುಪೇಟೆ ತಾಲ್ಲೂಕಿನ ವಣಕನಪುರ ಗ್ರಾಮದವಳು. ಈಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದಳು. ಗೀತಾಗೆ ಆಗಾಗ ತೀವ್ರ ಹೊಟ್ಟೆನೋವು ಬರುತ್ತಿತ್ತು. ಇದರಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಗೀತಾ ಹೊಟ್ಟೆ ನೋವು ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಲ್ಲಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸ್‌ ದಾಖಲಾಗಿದೆ.

Share Post