BengaluruPolitics

ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಟಿ ರೌಡ್ಸ್‌; ವಾಹನದಟ್ಟಣೆ ಪರಿಶೀಲನೆ

ಬೆಂಗಳೂರು; ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಮೇಲೆ ಡಿ.ಕೆ.ಶಿವಕುಮಾರ್‌ ಫುಲ್‌ ಆಕ್ಟೀವ್‌ ಆಗಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಲು ನಗರ ಸಂಚಾರ ಹಾಗೂ ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ಇವತ್ತೂ ಕೂಡಾ ಅವರು ಬಿಡಿಎ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಬಿಡಿಎ ಆಯುಕ್ತರು, ಅಧ್ಯಕ್ಷರು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯ ನಂತರ ಡಿ.ಕೆ.ಶಿವಕುಮಾರ್‌ ಅವರು ಸಿಟಿ ರೌಂಡ್ಸ್‌ ಶುರು ಮಾಡಿದ್ದಾರೆ. ಸಂಚಾರ ದಟ್ಟನೆ ಇರುವ ಪ್ರದೇಶಗಳಿಗೆ ಭೇಟಿ ಕೊಟ್ಟು, ಸಂಚಾರ ದಟ್ಟನೆ ಕಾರಣ ಏನು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೆ ಪರಿಹಾರ ಏನು ಎಂಬುದರ ಬಗ್ಗೆ ಸ್ಥಳದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಹೆಬ್ಬಾಳ ಸೇತುವೆ ಸೇರಿದಂತೆ ನಗರದ ಹಲವು ಕಡೆ ಡಿ.ಕೆ.ಶಿವಕುಮಾರ್‌ ಅವರು ಪರಿಶೀಲನೆ ನಡೆಸಲಿದ್ದಾರೆ.

Share Post