BengaluruPolitics

ಅಕ್ಕಿ ಕೊಡದ ಬಿಜೆಪಿಯವರು ಎಡಬಿಡಂಗಿಗಳು; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು; ಅನ್ನಭಾಗ್ಯಕ್ಕೆ ಕೇಂದ್ರ ಸಕ್ಕಿ ಕೊಡುತ್ತಿಲ್ಲ. ಈ ಬಗ್ಗೆ ಮಾತನಾಡುತ್ತಿರುವ ಬಿಜೆಪಿಯವರು ಎಡಬಿಡಂಗಿಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವ್ರು, ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ. ಇದು ಕೇಂದ್ರ ಸರ್ಕಾರದ ಮಲತಾಯಿ ದೋರಣೆ ಎಂದು ಕಿಡಿಕಾರಿದರು.

‌ಕೇಂದ್ರ ಸರ್ಕಾರದ ಬಳಿ ಸಾಕಷ್ಟು ಅಕ್ಕಿ ದಾಸ್ತಾನು ಇದೆ. ಹೀಗಿದ್ದರೂ ಕೇಂದ್ರ ಮಲತಾಯಿ ದೋರಣೆ ಅನುಸರಿಸ್ತಾ ಇದೆ. ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಪ್ರಬಲವಾಗುತ್ತೆ ಎಂಬ ಭಯ ಅವರನ್ನು ಕಾಡುತ್ತಿದೆ. ಜನರ ಮೇಲೆ ಬಿಜೆಪಿ ನಾಯಕರಿಗೆ ಕಾಳಜಿ ಇದ್ದಿದ್ದರೆ ಕೇಂದ್ರ ಸರ್ಕಾರವನ್ನು ಕೇಳಬೇಕಿತ್ತು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಾವು ಈ ಹಿಂದೆ ಏಳು ಕೆಜಿ ಅಕ್ಕಿ ಕೊಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತು. ಬಿಜೆಪಿಯವರು ಎಡಬಿಡಂಗಿಗಳು, ಅವರಿಗೆ ಇದು ಅವರಿಗೆ ಗೊತ್ತಾಗಲ್ಲ ಎಂದು ಹೇಳಿದರು.

Share Post