BengaluruCrime

ಡಿಸಿಎಂ ಡಿ.ಕೆ.ಶಿವಕುಮಾರ್‌ ಮೇಲಿನ 5 ಪ್ರಕರಣ ರದ್ದು ಮಾಡಿದ ಹೈಕೋರ್ಟ್‌

ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲಾಗಿದ್ದಯ ಐದು ಪ್ರಕರಣಗಳನ್ನು ರದ್ದು ಮಾಡಿ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ಸಮಯದಲ್ಲಿ ಕಾನೂನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆಂದು ಡಿ.ಕೆ.ಶಿವಕುಮಾರ್‌ ವಿರುದ್ಧ ಐದು ಕೇಸ್‌ ದಾಖಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್‌, ಐದೂ ಪ್ರಕರಣಗಳನ್ನು ರದ್ದುಪಡಿಸಿ ಆದೇಶ ನೀಡಿದೆ.

ಕೊರೊನಾ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸಲಾಗಿತ್ತು. ಮೇಕೆದಾಟಿನಿಂದ ಬೆಂಗಳೂರಿನವರೆಗೂ ಎರಡು ಹಂತದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಈ ವೇಳೆ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಪೊಲೀಸರು ಡಿ.ಕೆ.ಶಿವಕುಮಾರ್‌ ಸೇರಿ ಹಲವು ಕಾಂಗ್ರೆಸ್‌ ನಾಯಕರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್‌ ಹೈಕೋರ್ಟ್‌ ಮೊರೆಹೋಗಿದ್ದರು. ಡಿಕೆಶಿ ಅರ್ಜಿ ಪುರಸ್ಕರಿಸಿದ ಕೋರ್ಟ್‌, ಐದೂ ಕೇಸ್‌ಗಳನ್ನು ರದ್ದು ಮಾಡಿ ಆದೇಶ ಮಾಡಿದೆ.

Share Post