CrimeDistricts

ಮದ್ದೂರು ಬಳಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ; ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ ಸ್ಥಳದಲ್ಲೇ ಮೂವರು ವ್ಯಕ್ತಿಗಳು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಟಾಟಾ ನೆಕ್ಸಾನ್ ಕಾರಿಗೆ ಹಿಂದಿನಿಂದ ಬಂದ ಮಾರುತಿ ಡಿಸೈರ್ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ನಡೆದಿದೆ. ದುರಂತದಲ್ಲಿ ಸಾವನ್ನಪ್ಪಿದ ಮೂವರೂ ಮಾರುತಿ ಡಿಸೈರ್ ಕಾರಿನಲ್ಲಿದ್ದವರೇ ಎಂದು ತಿಳಿದುಬಂದಿದೆ. ಟಾಟಾ ನೆಕ್ಸಾನ್ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಅವರನ್ನು ಮಂಡ್ಯದ ವಿಮ್ಸ್‌ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು, ಧೀರಜ್ ಕುಮಾರ್ ಎಂದು ಹೇಳಲಾಗಿದೆ. ಉಳಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಮದ್ದೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post