CrimeDistricts

ತೆಲಂಗಾಣ ಶಾಸಕ ರೋಹಿತ್‌ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಡುಪಿ; ತೆಲಂಗಾಣದ ಶಾಸಕ ರೋಹಿತ್‌ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯ್ಯಾರು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಟೈಯರ್‌ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 

ಶಾಸಕ ರೋಹಿತ್‌ ರೆಡ್ಡಿಯವರು ಪ್ರವಾಸಕ್ಕೆಂದು ಬಂದಿದ್ದು, ಮಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಗವಾಗಿ ಚಲಿಸುತ್ತಿದ್ದಾಗ ಕಾರಿನ ಟಯರ್‌ ಸ್ಫೋಟಗೊಂಡಿದೆ. ಇದರಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ.

ಚಾಲಕನ ನಿಯಂತ್ರ ತಪ್ಪಿದ್ದರಿಂದಾಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಪ್ರಜ್ಞೆ ತಪ್ಪಿದ್ದಾನೆ. ಶಾಸಕ ರೋಹಿತ್‌ ರೆಡ್ಡಿಗೆ ಯಾವುದೇ ಅಪಾಯವಾಗಿಲ್ಲ.

 

Share Post