BengaluruCrime

ಅಕ್ರಮ ಆಸ್ತಿ ಗಳಿಕೆ; ಕೆಆರ್‌ ಪುರಂ ತಹಸೀಲ್ದಾರ್‌ ಅಜಿತ್‌ ರೈ ಅರೆಸ್ಟ್‌

ಬೆಂಗಳೂರು; ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೆಆರ್‌ ಪುರಂ ತಹಸೀಲ್ದಾರ್‌ ಅಜಿತ್‌ ರೈರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳಗ್ಗೆಯಿಂದ ಅವರ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ತಹಸೀಲ್ದಾರ್‌ ಅಜಿತ್‌ ರೈ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಅನ್ನೋದು ಗೊತ್ತಾಗಿತ್ತು. ಲಭ್ಯವಾದ ದಾಖಲೆಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

ಅಜಿತ್​ ರೈಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 40 ಲಕ್ಷ ರೂಪಾಯಿ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಸಂಬಂಧಿಕರು, ಸ್ನೇಹಿತರ ಹೆಸರುಗಳಲ್ಲೂ ಆಸ್ತಿ ಮಾಡಿದ್ದು, ಆ ಆಸ್ತಿ ಪತ್ರಗಳೆಲ್ಲಾ ಲೋಕಾಯುಕ್ತ ಪೊಲೀಸರಿಗೆ ಶೋಧ ಕಾರ್ಯಾಚರಣೆ ವೇಳೆ ಸಿಕ್ಕಿವೆ ಎಂದು ಹೇಳಲಾಗುತ್ತಿದೆ.

Share Post