BengaluruPolitics

ಜುಲೈ 10ರಿಂದ ಅನ್ನಭಾಗ್ಯ ಫಲಾನುಭವಿಗಳ ಅಕೌಂಟ್‌ಗೆ ಹಣ; ಸಿದ್ದರಾಮಯ್ಯ

ಬೆಂಗಳೂರು; ಜುಲೈ ತಿಂಗಳಿಂದ ಅಕ್ಕಿ ಬದಲು ಹಣ ಕೊಡುತ್ತೇವೆ ಎಂದು ಹೇಳಿದ್ದೇವೆ. ಹೀಗಾಗಿ ಜುಲೈ ಹತ್ತರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದೆವು. ಒಂದನೇ ತಾರೀಖೇ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ತಿಂಗಳಿನಿಂದಲೇ ಅನ್ನಭಾಗ್ಯ ಹಾಗೂ ಗೃಹಜ್ಯೋತಿ ಯೋಜನೆ ಜಾರಿ ಮಾಡಿದೇವೆ. ಇವತ್ತಿಂದಲೇ ಈ ಯೋಜನೆಗಳು ಜಾರಿಯಾಗಿವೆ. ಗೃಹಜ್ಯೋತಿಗೆ ಆಗಸ್ಟ್‌ ತಿಂಗಳಲ್ಲಿ ಬರುವ ಬಿಲ್‌ ಝೀರೋ ಬರಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share Post