DistrictsPolitics

ಪಕ್ಷ ಹೇಳಿದರೆ ಲೋಕಸಭೆಯಲ್ಲಿ ಸ್ಪರ್ಧೆಗೆ ಸಿದ್ಧ; ಯತೀಂದ್ರ ಸಿದ್ದರಾಮಯ್ಯ

ಮೈಸೂರು; ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ನಾನು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಕ್ಷ ಏನೇ ಸೂಚನೆ ಕೊಟ್ಟರೂ ಅದನ್ನು ಪಾಲಿಸುತ್ತೇನೆ ಎಂದು ಹೇಳಿದರು.

ಬೆಂಬಲಿಗರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲೀ, ನಮ್ಮ ತಂದೆಯವರಾಗಲೀ ಇದುವರೆಗೂ ಚರ್ಚೆ ಮಾಡಿಲ್ಲ. ಆದ್ರೆ ಪಕ್ಷ ಏನಾದರೂ ಸೂಚನೆ ನೀಡಿದರೆ ಅದನ್ನು ಪಾಲಿಸೋದಕ್ಕೆ ನಾನು ಸಿದ್ಧ ಇದ್ದೇನೆ ಎಂದು ಹೇಳಿದ್ದಾರೆ.

ಇನ್ನೂ ಚುನಾವಣೆ ದೂರ ಇದೆ. ಇನ್ನೂ ಎಂಟು ತಿಂಗಳಿಗೆ ಲೋಕಸಭಾ ಚುನಾವಣೆ ಎದುರಾಗಬಹುದು. ಆಗ ಪಕ್ಷದ ಹೈಕಮಾಂಡ್‌ ಅಭ್ಯರ್ಥಿ ಯಾರಾಗಬೇಕೆಂದು ನಿರ್ಧಾರ ಮಾಡುತ್ತೆ. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಬೇಕು. ಹೀಗಾಗಿ ಹೈಕಮಾಂಡ್‌ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ ಎಂದು ಯತೀಂದ್ರ ಹೇಳಿದರು.

Share Post