BengaluruPolitics

ರಾಜ್ಯ ಆರ್ಥಿಕವಾಗಿ ದಿವಾಳಿಯಾಗದಂತೆ ಎಚ್ಚರಿಕೆ ವಹಿಸಿದ್ದೇವೆ; ಸಿದ್ದರಾಮಯ್ಯ

ಬೆಂಗಳೂರು; ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಐದು ಗ್ಯಾರೆಂಟಿಗಳನ್ನು ನೀಡಿದ್ದೆವು. ಅಷ್ಟೂ ಗ್ಯಾರೆಂಟಿಗಳಿಗೆ ಬಜೆಟ್‌ನಲ್ಲಿ ಹಣ ಒದಗಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್‌ ಮಂಡನೆ ನಂತರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದೂ ಗ್ಯಾರೆಂಟಿಗಳನ್ನು ನಾವು ಜಾರಿ ಮಾಡುತ್ತಿದ್ದು, ಆರ್ಥಿಕವಾಗಿ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಂಡಿದ್ದೇವೆ ಎಂದರು.

ಐದೂ ಗ್ಯಾರೆಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ವಿಪಕ್ಷಗಳು ಆರೋಪಗಳು ಮಾಡಿದ್ದರು. ಆದ್ರೆ ಬಜೆಟ್‌ನಲ್ಲಿ ನಾವು ರಾಜ್ಯ ಆರ್ಥಿಕವಾಗಿ ದಿವಾಳಿಯಾಗದಂತೆ ನೋಡಿಕೊಂಡಿದ್ದೇವೆ. ಐದೂ ಗ್ಯಾರೆಂಟಿಗಳಿಗೆ ಹಣ ಮೀಸಲಿರಿಸಿಯೂ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗದಂತೆ ನೋಡಿಕೊಂಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 16ರಿಂದ ಶುರುವಾಗಲಿದೆ. ಆಗಸ್ಟ್‌ 15 ಅಥವಾ ಆಗಸ್ಟ್‌ 16ರಂದು ಮೊದಲ ಕಂತಿನ ಹಣ ಮನೆಯ ಯಜಮಾನಿಯ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.

Share Post