BengaluruPolitics

ಎನ್‌ಡಿಎ ಸೇರುತ್ತಾ ಜೆಡಿಎಸ್‌..?; ಇಂದು ಅಥವಾ ನಾಳೆ ಹೆಚ್ಡಿಕೆ ದೆಹಲಿಗೆ

ಬೆಂಗಳೂರು; ಇಂದು ಹಾಗೂ ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾಮೈತ್ರಿಕೂಟ ಸಭೆ ನಡೆಯುತ್ತಿದೆ. ಈ ಸಭೆಗೆ ಜೆಡಿಎಸ್‌ ನಾಯಕರಿಗೆ ಆಹ್ವಾನವನ್ನೇ ನೀಡಿಲ್ಲ. ಈ ನಡುವೆ ಜೆಡಿಎಸ್‌ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಸೇರೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಒಂದು ಕಡೆ ವಿರೋಧ ಪಕ್ಷಗಳು ಒಂದಾಗಿ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ನೇತೃತ್ವದ ಎನ್‌ಡಿಎ ಕೂಡಾ ತನ್ನ ಮಿತ್ರ ಪಕ್ಷಗಳ ಸಭೆ ಕರೆದಿದೆ. ಜುಲೈ 18ರಂದು ದೆಹಲಿ ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪಾಲ್ಗೊಳ್ಳುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ. ಆದ್ರೆ ಅದಕ್ಕೂ ಮುನ್ನ ಕುಮಾರಸ್ವಾಮಿಯವರು ಬಿಜೆಪಿ ನಾಯಕರನ್ನು ಭೇಟಿಯಾಗಿ ಮಾತಕತೆ ನಡೆತ್ತಾರೆ ಎಂದು ಹೇಳಲಾಗುತ್ತಿದೆ.

ಇತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ವಿರೋಧ ಪಕ್ಷಗಳ ಮಹಾಮೈತ್ರಿಕೂಟ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ. ಸಭೆಗೆ ಅವರು ನಮ್ಮನ್ನು ಕರೆದಿಲ್ಲ. ಜೆಡಿಎಸ್‌ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ. ಇನ್ನೂ ದಿನಗಳಿವೆ ಕಾದುನೋಡೋಣ ಎಂದು ಹೇಳಿದ್ದಾರೆ.

Share Post