BengaluruPolitics

ಸರ್ವಾಧಿಕಾರ ವಿರೋಧಿಸುವವರೆಲ್ಲಾ ಒಂದಾಗುತ್ತೇವೆ; ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌

ಬೆಂಗಳೂರು; ಜಾತ್ಯತೀತ ತತ್ವದ ಮೇಲೆ ನಂಬಿಕೆ ಇರುವವರು ಹಾಗೂ ಸರ್ವಾಧಿಕಾರ ವಿರೋಧಿಸುವವರೆಲ್ಲಾ ಒಂದಾಗುತ್ತಿದ್ದೇವೆ. ಇದರ ಮೇಲೆ ನಂಬಿಕೆ ಇರುವವರೆನ್ನೆಲ್ಲಾ ನಾವು ಸ್ವಾಗತ ಮಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಬಗ್ಗೆ ಮಾತನಾಡಿರುವ ವೇಣುಗೋಪಾಲ್‌ ಅವರು, ಅವರನ್ನು ಕಳೆದ ಚುನಾವಣೆಯಲ್ಲೇ ನೋಡಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ. ಅವರು ಯಾವ ಫ್ಲಾಟ್‌ಫಾರ್ಮ್‌ನಲ್ಲಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದೂ ಲೇವಡಿ ಮಾಡಿದ್ದಾರೆ. ಸಮಾನ ಮನಸ್ಕ ಪಕ್ಷಗಳು  ಜೂನ್ 23 ರಂದು ಪಾಟ್ನಾದಲ್ಲಿ ಸಭೆ ನಡೆಸಿದ್ದವು. ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತಿದೆ. ಮಂಗಳವಾರದ ಸಭೆಯಲ್ಲಿ 26 ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

 

Share Post