BengaluruPolitics

ಸುದ್ದಿಯಾಗಬೇಕು ಅಂತ ಕುಮಾರಸ್ವಾಮಿ ಮಾತನಾಡ್ತಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ವಿಪಕ್ಷಗಳ ಮಹಾಮೈತ್ರಿ ಸಭೆಗೆ ಆಗಮಿಸುವ ರಾಜಕಾರಣಿಗಳನ್ನು ಬರಮಾಡಿಕೊಳ್ಳಲು ಐಎಎಸ್‌ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸುದ್ದಿಯಾಗಬೇಕು ಅಂತ ಕುಮಾರಸ್ವಾಮಿಯವರು ಇಂತಹ ಹೇಳಿಕೆ ನೀಡುತ್ತಿದ್ಧಾರೆ ಎಂದು ತಿರುಗೇಟು ನೀಡಿದ್ದಾರೆ.

ಎಲ್ಲಾ ಸಂದರ್ಭದಲ್ಲೂ ಇದು ಬೆಳೆದುಕೊಂಡು ಬಂದಿರುವ ಪದ್ಧತಿ. ಅಧಿಕಾರಿಗಳನ್ನು ಬಳಕೆ ಮಾಡುತ್ತಿರುವುದು ಇದು ಮೊದಲೇನಲ್ಲ. ಪ್ರೋಟೋಕಾಲ್‌ ಪ್ರಕಾರವೇ ಅಧಿಕಾರಿಗಳು ಭಾಗಿಯಾಗಿದ್ದಾರೆ. ಹೀಗಾಗಿ ನಾನು ಕುಮಾರಸ್ವಾಮಿಯವರಿಗೆ ಉತ್ತರ ಕೊಡಬೇಕಾದ ಅಗತ್ಯತೆ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಕುಮಾರಸ್ವಾಮಿಯವರು ಎನ್‌ಡಿಎ ಸೇರಲು ಸಿದ್ಧತೆ ನಡೆಸಿದ್ದಾರೆ. ಅಲ್ಲಿಂದ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

 

Share Post