DistrictsLifestyle

ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದಿಗ್ವಿಜಯ್‌ಸಿಂಗ್‌ ದಂಪತಿ

ಕಾರವಾರ; ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ದಿಗ್ವಿಜಯ್‌ ಸಿಂಗ್‌ ಅವರು ಪತ್ನಿ ಸಮೇತರಾಗಿ ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿ ಅವರು ಗೋಕರ್ಣಕ್ಕೆ ಆಗಮಿಸಿ ಮಹಾಬಲೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರ ಪತ್ನಿ ಅಮೃತ ರೈ ಜೊತೆಗಿದ್ದರು.

ಆತ್ಮಲಿಂಗಕ್ಕೆ ದಿಗ್ವಿಜಯ್‌ ಸಿಂಗ್‌ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮಣಿಪುರದಲ್ಲಿ ಮೂರು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡುತ್ತಿಲ್ಲ. ಸ್ಥಳಕ್ಕೆ ಹೋಗಿ ಪರಿಸ್ಥಿತಿ ಪರಿಶೀಲಿಸುವುದಕ್ಕೂ ಹೋಗಿಲ್ಲ. ಹೀಗಾಗಿ ನಾವು ಅವರಿಗೆ ಪ್ರಶ್ನೆ ಕೇಳುತ್ತಿದ್ದೇವೆ. ಆದ್ರೆ ಅವ್ರು ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿಲ್ಲ ಎಂದು ಹೇಳಿದರು.

 

Share Post