CrimeNational

ಜೈಪುರದ ಭೀಕರ ರಸ್ತೆ ಅಪಘಾತ; 7 ಮಂದಿ ದುರ್ಮರಣ

ಜೈಪುರ; ಬಸ್ಸು ಹಾಗೂ ವ್ಯಾನ್‌ ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದ ಬಳಿ ನಡೆದಿದೆ. ಇಲ್ಲಿ ದಿಡ್ವಾನಾ-ಕುಚಮನ್‌ ಜಿಲ್ಲೆಯ ಬಂಥಾಡಿ ಬಳಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರಲ್ಲಿ ಎಲ್ಲರೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

ಡಿಎಸ್‌ಪಿ ಧರಂಚಂದ್‌ ಬಿಷ್ಣೋಯ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಗಾರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಅವರನ್ನು ಜೈಪುರ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ವ್ಯಾನ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಸಿಕಾರ್‌ನಿಂದ ನಾಗೌರ್‌ಗೆ ತೆರಳುತ್ತಿದ್ದರು. ಈ ವೇಳೆ ಬಸ್‌ ಹಾಗೂ ವ್ಯಾನ್‌ ಮುಖಾಮುಖಿ ಡಿಕ್ಕಿ ಹೊಡೆದಿವೆ.

 

Share Post