BengaluruHealth

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ; ಜಯದೇವದಲ್ಲಿ ಚಿಕಿತ್ಸೆ ಪಡೆದ ರಾಜ್ಯಪಾಲ ಥಾವರ್‌ ಚಂದ್‌

ಬೆಂಗಳೂರು; ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ದಿಢೀರ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಅವರು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು ಎರಡೂವರೆ ಗಂಟೆಗಳ ಕಾಲ ಚಿಕಿತ್ಸೆ ಪಡೆದು ಅವರು ರಾತ್ರಿಯೇ ಡಿಸ್‌ಚಾರ್ಜ್‌ ಆಗಿದ್ದಾರೆ.

ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕೊಂಚ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ತಪಾಸಣೆ ಮಾಡಿಸಿದ್ದಾರೆ. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ ರಾತ್ರಿ 10 ರಿಂದ 12:50 ರವರೆಗೆ ಚಿಕಿತ್ಸೆ ಪಡೆದಿದ್ದಾರೆ. ಅನಂತರ ರಾತ್ರಿಯೇ ಡಿಸ್‌ಚಾರ್ಜ್‌ ಮಾಡಿಸಿಕೊಂಡು ರಾಜಭನವಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರು ಆರಾಮಾಗಿದ್ದಾರೆ ಎಂದು ಹೇಳಲಾಗಿದೆ.

Share Post