BengaluruCrimePolitics

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ ವಿಚಾರ; ಸಚಿವ ಹೆಚ್‌.ಸಿ.ಮಹದೇವಪ್ಪ ಆಕ್ರೋಶ

ಬೆಂಗಳೂರು; ಆಕ್ಷೇಪಾರ್ಹ ಹೇಳಿಕೆ ನೀಡಿ ದಲಿತರ ಸ್ವಾಭಿಮಾನಕ್ಕೆ ತಂದಿರುವ ನಟ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸ್ವಾತಂತ್ಯ ಬಂದು 77 ವರ್ಷ ಕಳೆಯುತ್ತಿದೆ. ಆದರೂ ಕೂಡಾ ಇವತ್ತೂ ಜಾತಿ ಹೆಸರನ್ನು ಕರೆಯಲಾಗುತ್ತಿದೆ. ಇದು ಸಮುದಾಯಕ್ಕೆ ಅಷ್ಟೇ ಅಲ್ಲ, ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಹೇಳಿದ್ದಾರೆ.

ಉಪೇಂದ್ರ ಅವರು ಸ್ವಂತ ಪಕ್ಷ ಸ್ಥಾಪನೆ ಮಾಡಿದ್ದಾರೆ. ನಟ, ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ಇಂತಹವರು ಯೋಚನೆ ಮಾಡಿ ಮಾತನಾಡಬೇಕು. ಅದು ಬಿಟ್ಟು ಹೀಗೆ ಮಾತಾನಾಡುವುದು ಸರಿಯಲ್ಲ. ಒಂದು ಸಮುದಾಯವನ್ನು ಅವಹೇಳನ ಮಾಡುವುದನ್ನು ನಾನು ಖಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Share Post