CrimeDistrictsHealth

ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಮನಬಂದಂತೆ ಕಚ್ಚಿದ ಶ್ವಾನಗಳು

ಬೆಳಗಾವಿ; ನಗರ ಪ್ರದೇಶಗಳಲ್ಲಿ ಮಾಂಸದಂಗಡಿಗಳವರು ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುತ್ತಾರೆ. ಆ ತ್ಯಾಜ್ಯವನ್ನು ತಿಂದ ನಾಯಿಗಳು ಆಕ್ರಮಣ ಮನಸ್ಥಿತಿ ಬೆಳೆಸಿಕೊಳ್ಳುತ್ತಿವೆ. ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಬೆಳಗಾವಿ ನಗರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಹಲವು ಬೀದಿನಾಯಿಗಳು ದಾಳಿ ಮಾಡಿದೆ. ಮನಬಂದಂತೆ ಬಾಲಕನಿಗೆ ಕಚ್ಚಿ ಗಾಯಗೊಳಿಸಿವೆ.

ಸಾರ್ವಜನಿಕರು ನೋಡದೇ ಇದ್ದಿದ್ದರೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪು ಸಾಧ್ಯತೆ ಇತ್ತು. ಆದ್ರೆ ಸೂಕ್ತ ಸಮಯದಲ್ಲಿ ಸ್ಥಳೀಯರು ನಾಯಿಗಳನ್ನು ಓಡಿಸಿದ್ದರಿಂದ ಬಾಲಕ ಬದುಕುಳಿದಿದ್ದಾರೆ. ಬೆಳಗಾವಿಯ ಸಂಗಮೇಶ್ವರ ನಗರದ ಅರ್ಕಾನ್‌ ರಿಯಾಜ್‌ ಎಂಬ ಬಾಲಕನೇ ಗಾಯಗೊಂಡಾತ. ಬಾಲಕನ ತಲೆ, ಬೆನ್ನಿಗೆ ಗಂಭೀರ ಗಾಯಗಳಾಗಿವೆ.

ಸದ್ಯ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗಿದ್ದು, ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ.

Share Post