BengaluruPolitics

ಎಸ್‌.ಟಿ.ಸೋಮಶೇಖರ್‌ ಕ್ಷೇತ್ರಕ್ಕೆ ಬಂಪರ್‌; 7.63 ಕೋಟಿ ಅನುದಾನ ಮಂಜೂರು

ಬೆಂಗಳೂರು; ಯಶವಂತಪುರದ ಶಾಸಕ ಎಸ್‌.ಟಿ.ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವಾಗಿ ನಿನ್ನೆ ಎಸ್‌.ಟಿ.ಸೋಮಶೇಖರ್‌ ಅವರ ಹಲವಾರು ಬೆಂಬಲಿಗರು ಕಾಂಗ್ರೆಸ್‌ ಸೇರಿದ್ದಾರೆ. ಈ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್‌ ಅನುದಾನ ಸಿಕ್ಕಿದೆ. ಬಿಬಿಎಂಪಿಯಿಂದ ಎಸ್‌.ಟಿ.ಸೋಮಶೇಖರ್‌ ಅವರ ಯಶವಂತಪುರ ಕ್ಷೇತ್ರಕ್ಕೆ ಬರೋಬ್ಬರಿ 7.63 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಎಸ್‌.ಟಿ.ಸೋಮಶೇಖರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಇನ್ನೊಂದೆಡೆ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೂಡಾ ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಬೆನ್ನಲ್ಲೇ ಬಿಬಿಎಂಪಿಯಿಂದ ಕೋಟಿ ಕೋಟಿ ಅನುದಾನ ಮಂಜೂರಾಗಿರುವ ಆದೇಶ ಬಂದಿದೆ. ಈ ಅನುದಾನ ಮಂಜೂರು ಮಾಡುವಲ್ಲಿ ಡಿ.ಕೆ.ಶಿವಕುಮಾರ್‌ ಪಾತ್ರ ದೊಡ್ಡದಿದೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, 7.63 ಕೋಟಿ ರೂಪಾಯಿ ಅನುದಾನವನ್ನು ಯಶವಂತಪುರ ಕ್ಷೇತ್ರದ ಕುಡಿಯುವ ನೀರಿನ ಅನುದಾನಕ್ಕೆ ಬಳಸಿಕೊಳ್ಳಲಾಗುತ್ತದೆ. .63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ.

Share Post