Bengaluru

ಕಾವೇರಿ ವಿಚಾರ; ವಸ್ತುಸ್ಥಿತಿ ಚರ್ಚೆ ಮಾಡಿದ್ದೇವೆ – ಸಿದ್ದರಾಮಯ್ಯ

ಬೆಂಗಳೂರು; ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ವಸ್ತು ಸ್ಥಿತಿಯ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವ ಪಕ್ಷಗಳ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಪಕ್ಷಗಳ ಮಾಜಿ ಸಿಎಂಗಳು, ಲೀಗಲ್‌ ಟೀಮ್‌, ರೈತ ಮುಖಂಡರಿಂದ ಅಭಿಪ್ರಾಯ ಪಡೆದಿದ್ದೇವೆ ಎಂದು ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ನಿಲುವು ತೆಗೆದುಕೊಳ್ಳುವಾಗ ಅದರಲ್ಲಿ ರಾಜಕೀಯ ಮಾಡೋದಿಲ್ಲ ಎಂದು ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಹೇಳಿದ್ದಾರೆ. ರಾಜ್ಯ ತೆಗೆದುಕೊಳ್ಳುವ ನಿಲುವಿಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ಸೂಚಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಆಗಸ್ಟ್‌ನಲ್ಲಿ ಮಳೆಯ ಕೊರತೆಯಾಗಿದೆ. ಕಬಿನಿ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡೋದು ಕಷ್ಟ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ಸಭೆಯಲ್ಲಿ ಕಾವೇರಿಯ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ. ಲೀಗಲ್‌ ಟೀಂ ಕೂಡಾ ಕಾನೂನು ದೃಷ್ಟಿಯಿಂದ ಏನಾಗಿದೆ ಎಂಬುದನ್ನೂ ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂಗಳು, ರೈತ ಮುಖಂಡರುಗಳು ಕೂಡಾ ತಮ್ಮ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Share Post