CrimeDistricts

ವಾರ್ಡನ್‌ ಮೇಲೆ ಹಲ್ಲೆ ಮಾಡಿದ್ದ ಯುವಕನ ಬಂಧನ

ರಾಯಚೂರು; ಹಾಸ್ಟೆಲ್‌ ವಾರ್ಡನ್‌ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ಲಿಂಗಸುಗೂರಿನ ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಎಂಬಾತನೇ ಬಂಧಿತ ಆರೋಪಿ.

ಈಚನಾಳದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಪರಿಶೀಲನೆಗೆ ಅಧಿಕಾರಿಗಳು ಬಂದಿದ್ದರು. ಅವರ ಜೊತೆ ಕರಡಕಲ್ ಬಾಲಕರ ವಸತಿನಿಲಯದ ಕಿರಿಯ ವಾರ್ಡನ್ ಶರಣಪ್ಪ ಕೂಡಾ ಬಂದಿದ್ದರು. ಈ ವೇಳೆ ಈಚನಾಳ ಗ್ರಾಮದ ಯುವಕ ಮಲ್ಲರೆಡ್ಡೆಪ್ಪ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಇದನ್ನು ಶರಣಪ್ಪ ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಮಲ್ಲರೆಡ್ಡೆಪ್ಪ ಎಂಬ ಯುವಕ ವಾರ್ಡನ್‌ ಶರಣಪ್ಪ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾನೆ.

ಈ ಸಂಬಂಧ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಕೂಡಾ ವಾರ್ಡನ್‌ ವಿರುದ್ಧ ಪ್ರತಿದೂರು ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ.

 

Share Post