DistrictsPolitics

ಗೃಹಲಕ್ಷ್ಮಿ ಯೋಜನೆ ಭಾಗವಾಗಿ ಚಾಮುಂಡೇಶ್ವರಿಗೆ 2 ಸಾವಿರ ರೂ. ಕಾಣಿಕೆ

ಮೈಸೂರು; ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈ ಕಾರಣದಿಂದಾಗಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಅವರು ಹರಕೆಯನ್ನೂ ತೀರಿಸಿದ್ದಾರೆ. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗೃಹಲಕ್ಷ್ಮೀ ಯೋಜನೆಯ ಭಾಗವಾಗಿ ಚಾಮುಂಡೇಶ್ವರಿಗೆ ಎರಡು ಸಾವಿರ ರೂಪಾಯಿ ಕಾಣಿಕೆಯನ್ನು ಅರ್ಪಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಲಾ 2 ಸಾವಿರ ರೂಪಾಯಿ ಕಾಣಿಕೆಯನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದರು. ಆ ಮೂಲಕ ಗೃಹಲಕ್ಷ್ಮಿ ಯೋಜನೆ ಭಾಗವಾಗಿ ನಾಡನ್ನು ಕಾಯುವ ದೇವತೆ ತಾಯಿ ಚಾಮುಂಡಿಗೆ ಮೊದಲ ಕಾಣಿಕೆ ಅರ್ಪಿಸಿದ್ದಾರೆ.

Share Post