CrimeNational

ಕಸ್ಬಯಾರ್‌ನಲ್ಲಿ ಗುಂಡಿನ ಚಕಮಕಿ; ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಪಾಕಿಸ್ತಾನ ಗಡಿಯಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ಭಾರತೀಯ ಯೋಧರ ಗುಂಡಿಗೆ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಬಳಿಯ ಕಸ್ಬಯಾರ್‌ಯಲ್ಲಿ ಈ ಗುಂಡಿನ ಕಾಳಗ ನಡೆದಿದೆ.


ಯೋದರ ಗುಂಡಿಗೆ ಬಲಿಯಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆಯೂ ಇನ್ನೂ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಸದ್ಯ ತನಿಖೆ ಶುರು ಮಾಡಲಾಗಿದೆ. ಇನ್ನೂ ಒಂದಷ್ಟು ಉಗ್ರರು ಅಡಗಿರುವ ಶಂಕೆ ಇದ್ದು, ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Share Post