BengaluruPolitics

ಕರಾವಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್;‌ ಸುಕುಮಾರಶೆಟ್ಟಿ ಕಾಂಗ್ರೆಸ್‌ ಸೇರೋದು ಫಿಕ್ಸ್‌

ಉಡುಪಿ; ರಾಜ್ಯದಲ್ಲಿ ಆಪರೇಷನ್‌ ಹಸ್ತ ಜೋರಾಗೇ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಯ ಹಲವು ಮುಖಂಡರು ಭೇಟಿಯಾಗುತ್ತಲೇ ಇದ್ದಾರೆ. ಇದರ ನಡುವೆ ಮಾಜಿ ಶಾಸಕರೊಬ್ಬರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರೋದು ಫಿಕ್ಸ್‌ ಆಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದ ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್‌ ಸೇರುತ್ತೇನೆ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ಸುಕುಮಾರಶೆಟ್ಟಿಯವರು ಕಾಂಗ್ರೆಸ್‌ ಸೇರಲಿದ್ದಾರೆ. ಅದನ್ನು ಸ್ವತಃ ಸುಕುಮಾರಶೆಟ್ಟಿಯವರೇ ಸ್ಪಷ್ಟಪಡಿಸಿದ್ದಾರೆ. ನನಗೆ ಬಿಜೆಪಿಯಿಂದ ಟಿಕೆಟ್‌ ಕೊಡದೆ ಅನ್ಯಾಯ ಮಾಡಿದರು. ಬಿಜೆಪಿ ಪಕ್ಷ ಯಾರನ್ನೂ ಬೆಳೆಯಲು ಬಿಡೋದಿಲ್ಲ ಅಂತ ಸುಕುಮಾರಶೆಟ್ಟಿ ಹೇಳಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ. ಹೀಗಾಗಿ ಕಾಂಗ್ರೆಸ್‌ ಸೇರುವಂತೆ ಸ್ಥಳೀಯ ಮುಖಂಡರು ಹೇಳುತ್ತಿದ್ದರು. ಹೀಗಾಗಿ ಕಾಂಗ್ರೆಸ್‌ ಸೇರುವ ದೃಢ ನಿರ್ಧಾರ ಮಾಡಿದ್ದೇನೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರ ಜೊತೆ ಕೂಡಾ ಮಾತನಾಡಿದ್ದೇನೆ ಎಂದು ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನನಗೆ ಹಲವಾರು ಬಾರಿ ಕರೆ ಮಾಡಿ ಆಹ್ವಾನ ನೀಡಿದ್ದರು. ನನಗೂ ಕಾಂಗ್ರೆಸ್‌ ಸೇರುವ ಬಗ್ಗೆ ಒಪ್ಪಿಗೆ ಇದೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಗ್ರೀನ್‌ ಸಿಗ್ನಲ್‌ ನೀಡಿದ್ದೇನೆ ಎಂದು ಮಾಜಿ ಶಾಸಕ ಸುಕುಮಾರ ಶೆಟ್ಟಿ ಹೇಳಿದ್ದಾರೆ.

 

Share Post