Districts

ಪಂಚಮಸಾಲಿ ಹೋರಾಟ ಮತ್ತೆ ಮುನ್ನೆಲೆಗೆ; ಇಷ್ಟಲಿಂಗ ಪೂಜೆ ಮೂಲಕ ಹೋರಾಟ

ಬೆಳಗಾವಿ; ಪಂಚಮಸಾಲಿ ಸಮುದಾಯಕ್ಕೆ 2ಎ‌ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಮತ್ತೆ ಹೋರಾಟ ಶುರುವಾಗುತ್ತಿದೆ.  ಇದು ಆರನೇ ಹಂತದ ಹೋರಾಟವಾಗಿದ್ದು, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು‌ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತವ ವಹಿಸಿದ್ದಾರೆ.ಇಂದಿನಿಂದ ಹೋರಾಟ ಶುರುವಾಗಲಿದೆ.

  ಲೋಕಸಭಾ ಚುನಾವಣೆ ಸನಿಹದಲ್ಲಿ ಪಂಚಮಸಾಲಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿರುವುದು ಕುತೂಹಲ ಕೆರಳಿಸಿದೆ.

 ಶ್ರೀಗಳು, ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ. ಅನಂತರ ರಾಷ್ಟ್ರೀಯ ಹೆದ್ದಾರಿ ಮೂಲಕ ತೆರಳಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಸಲಿದ್ದಾರೆ.

 

Share Post