Districts

ಮಂಡ್ಯದಲ್ಲಿ ಕಾವೇರಿ ಹೋರಾಟ ಜೋರು; ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ

ಮಂಡ್ಯ; ಕಾವೇರಿ ಹೋರಾಟದಲ್ಲಿ ಕೆಲವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕೆಲವರು ರಸ್ತೆಯಲ್ಲಿ ಟೀ ತಯಾರಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಮಂಡ್ಯದಲ್ಲಿ ಹೋರಾಟಗಾರರು ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮಯ್ಯ ಅವರು ಬರಗಾಲದ ಸಿಎಂ. ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬರಗಾಲ ಬರುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಮಣ್ಣು ಹಾಕಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಕೆಲ ಪ್ರತಿಭಟನಾಕಾರರು ಬಾಯಿಗೆ ಮಣ್ಣು ಹಾಕಿಕೊಂಡು ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯ ರೈತರು ಮಣ್ಣು ತಿನ್ನುವಂತೆ ಮಾಡಿದೆ ಎಂದೂ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

Share Post