Bengaluru

ಬಂದ್‌ ಮಾಡೋದಕ್ಕೆ ಅವಕಾಶವಿಲ್ಲ, ಜನರಿಗೆ ರಕ್ಷಣೆ ಕೊಡ್ತೀವಿ; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದ್ರೆ ಈ ಬಂದ್‌ಗೆ ಅವಕಾಶ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಬಂದ್‌ ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಹೀಗಾಗಿ ಬಂದ್‌ಗೆ ಅವಕಾಶವಿಲ್ಲ. ನಾವು ಜನತೆಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳಿದ್ದಾರೆ. 

ನಾವು ಪ್ರತಿಭಟನಾಕಾರರಿಗೆ ಅಡ್ಡಿ ಮಾಡೋದಿಲ್ಲ.  ಆದ್ರೆ ಜನರು ತೊಂದರೆ ಅನುಭವಿಸೋದಕ್ಕೂ ನಾವು ಬಿಡುವುದಿಲ್ಲ. ನಾವು ಸಾರ್ವಜನಿಕರಿಗೆ ರಕ್ಷಣೆ ಕೊಟ್ಟೇ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಇನ್ನು ನಾಳೆಯೇ (ಶುಕ್ರವಾರ)  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೀಟಿಂಗ್ ಇದೆ. ನಮ್ಮ ಅಧಿಕಾರಿಗಳಿಗೆ ವರ್ಚುಯಲ್ ಮೂಲಕ ಬೇಡ, ನೀವೇ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ ಎಂದು  ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಿಎಂ‌ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೀವಿ. ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು. ನಾಳೆ ಮೀಟಿಂಗ್ ನಲ್ಲಿ ಬರುವ ಆದೇಶ ನೋಡಿಕೊಂಡು ಕೋರ್ಟ್‌ಗೆ ಹೋಗ್ತೀವಿ ಎಂದರು.

 

Share Post