CrimeDistricts

ಶಿವಮೊಗ್ಗ ಗಲಾಟೆ ಪ್ರಕರಣ; ಇದುವರೆಗೆ 24 ಮಂದಿ ವಿರುದ್ಧ ಎಫ್‌ಐಆರ್‌ – ಎಸ್ಪಿ ಮಿಥುನ್‌ಕುಮಾರ್‌

ಶಿವಮೊಗ್ಗ; ಭಾನುವಾರ ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಇದುವರೆಗೆ 24 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್‌ ಕುಮಾರ್‌ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, ನಗರ ಸಹಜಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ.

ಭಾನುವಾರ ನಡೆದ ಘಟನೆಯ ವಿಡಿಯೋಗಳು, ಫೋಟೋಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 60 ಮಂದಿಯನ್ನು ವಿಚಾರಣೆ ಮಾಡಿದ್ದೇವೆ. ಇದರಲ್ಲಿ 24 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದೇವೆ ಎಂದು ಮಿಥುನ್‌ಕುಮಾರ್‌ ಹೇಳಿದ್ದಾರೆ. ಇನ್ನು ಎಂಟು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

 

Share Post